ವನ್ಯಜೀವಿ ಕಾಯ್ದೆಯಡಿ ಸಿದ್ರಾಮಯ್ಯ ಹಿರೇಮಠ್ ವಿರುದ್ದ ಎಫ್.ಐ.ಆರ್. ದಾಖಲು ಆರೋಪಿ ಪರಾರಿ

0
2047

ಕಲಬುರಗಿ, ಜುಲೈ, 29: ಆರ್.ಟಿ.ಐ. ಕಾರ್ಯಕರ್ತ ಸಿದ್ರಾಮಯ್ಯ ಹಿರೇಮಠ ವಿರುದ್ಧ ವನ್ಯಜೀವಿ ಕಾಯ್ದೆಯಡಿ ಪ್ರಥಮ ದೋಷಾರೋಪಣ ಪಟ್ಟಿ ದಾಖಲಾಗಿದೆ.
ಜಿಲ್ಲೆಯ ಚಿಂಚೋಳ್ಳಿ ತಾಲ್ಲೂಕಿನ ಕೊಂಚಾವರನ್ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಕಾನೂನು ಬಾಹಿರವಾಗಿ ನುಗ್ಗಿ , ಪ್ರಾಣಿಗಳಿಗೆ ಆಹಾರ ನೀಡುವ ಮೂಲಕ ಅವುಗಳ ಸಾವಿಗೆ ಕಾರಣದ ಪ್ರಕರಣಕ್ಕೆ ಸಂಬAಧಿಸಿದAತೆ ಇತನ ವಿರುದ್ದ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972, ಸೆಕ್ಷನ್ 27 ಮತ್ತು 51 ರಡಿ ಪ್ರಕರಣ ದಾಖಲಿಸಿದ್ದಾರೆ.
ಆರೋಪಿಗಾಗಿ ಅರಣ್ಯ ಅಧಿಕಾರಿಗಳು ಹುಡುಕಾಟ ನಡಿಸಿದ್ದಾರೆ .ಆದರೆ ಆರೋಪಿ ತಲೆಮರೆಸಿಕೊಂಡಿದ್ದು , ಬೆಂಗಳೂರಿನಲ್ಲಿ ಇರುವುದಾಗಿ ತಿಳಿದುಬಂದಿದೆ . ಅರಣ್ಯ ಅಧಿಕಾರಿಗಳು ಮತ್ತು ಪೊಲೀಸರಿಂದ ತೀವ್ರ ಹುಡುಕಾಟ ನಡೆದಿದೆ.

LEAVE A REPLY

Please enter your comment!
Please enter your name here