ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಗಣ್ಯರಿಂದ ಪುಷ್ಪನಮನ

0
820

ಕಲಬುರಗಿ, ಡಿ. 6: ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ 64 ನೇ ಮಹಾಪರಿನಿರ್ವಾಣ ದಿನಾಚರಣೆಯ ಅಂಗವಾಗಿ ಜಗತ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ರವಿವಾರ ವಿವಿಧ ರಾಜಕೀಯ ಪಕ್ಷದ ಮುಖಂಡರು, ಶಾಸಕರುಗಳು, ಗಣ್ಯರು ಪುಷ್ಪನಮನ ಸಲ್ಲಿಸಿದರು.
ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಬಸವರಾಜ ಮತ್ತಿಮೂಡ, ಬಿಜೆಪಿ ಮುಖಂಡ ಚಂದು ಪಾಟೀಲ, ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಲಂ ಪ್ರಭು ಪಾಟೀಲ, ಬಿಜೆಪಿ ಮುಖಂಡ ರಾಘವೇಂದ್ರ ಕುಲಕರ್ಣಿ, ಮುಖಂಡರಾದ ಪವನಕುಮಾರ ವಳಕೇರಿ ಪುಷ್ಪನಮನ ಸಲ್ಲಿಸಿದರು.

LEAVE A REPLY

Please enter your comment!
Please enter your name here