ಪೌರಕಾರ್ಮಿಕರಿಗೆ ಉಪಹಾರ ಕೊಡಿ, ಹಣ ಬೇಡ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳ ಖಡಕ ಸೂಚನೆ

0
938

ಕಲಬುರಗಿ.ಡಿ.19: ಪೌರಕಾರ್ಮಿಕರಿಗೆ ಉತ್ತಮ ಗುಣಮಟ್ಟದ ಮತ್ತು ಒಳ್ಳೆಯ ಪ್ರಮಾಣದಲ್ಲಿ ಬೆಳಗಿನ ಉಪಹಾರ ನೀಡಬೇಕು, ಅದು ಬಿಟ್ಟು ಹಣಬಾರದು ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸಾö್ನ ಅವರು ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ ಅವರಿಗೆ ಖಡಕ ನಿರ್ದೇಶನ ನೀಡಿದ್ದಾರೆ.
ಶನಿವಾರ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಮ್ಯಾನ್ಯುವಲ್ ಸ್ಕಾö್ಯವೆಂರ‍್ಸ್ ನೇಮಕಾತಿ ಪ್ರತಿಬಂಧಕ ಮತ್ತು ಪುನರ್ ವಸತಿ ಅಧಿನಿಯಮ-2013ರ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿಗಳು ಮಾತನಾಡಿದರು.
ಗುಣಮಟ್ಟದ ಉಪಹಾರದ ನೀಡುತ್ತಿಲ್ಲ ಎಂಬ ಆರೋಪ ಹಿನ್ನೆಲೆಯಲ್ಲಿ ಕಲಬುರಗಿ ಮಹಾನಗರ ಪಾಲಿಕೆಯಿಂದ ಕಳೆದ ಒಂದು ತಿಂಗಳಿನಿAದ ಉಚಿತ ಉಪಹಾರ ನಿಲ್ಲಿಸಿ ಅದರ ಬದಲಾಗಿ ಹಣ ನೀಡಲಾಗುತ್ತಿದೆ. ಇದಕ್ಕೆ ಜಿಲ್ಲಾಧಿಕಾರಿಗಳು ಪೌರಕಾರ್ಮಿಕರಿಗೆ ಹಣ ನೀಡಿದರೆ ಸರಿ ಹೋಗುವುದಿಲ್ಲ, ಮತ್ತೊಮ್ಮೆ ಟೆಂಡರ್ ಕರೆದು ಗುಣಮಟ್ಟದ ಉಚಿತ ಉಪಹಾರ ನೀಡಲು ಕ್ರಮ ವಹಿಸಿ ಎಂದರು.
ರಾಷ್ಟಿçÃಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಪೌರ ಕಾರ್ಮಿಕರು ಮತ್ತು ಮ್ಯಾನ್ಯುವಲ್ ಸ್ಕಾö್ಯವೆಂರ‍್ಸ್ಗಳು ಮತ್ತು ಅವರ ಅವಲಂಭಿತರಿಗೆ ನೇರ ಸಾಲ ಮತ್ತು ಉದ್ಯಮಶೀಲತಾ ಯೋಜನೆಯಡಿ 449 ಅರ್ಜಿ ಸಲ್ಲಿಕೆಯಾಗಿದ್ದು, ಗ್ರಾಮ ಪಂಚಾಯತಿ ನೀತಿ ಸಂಹಿತೆ ಮುಗಿದ ಕೂಡಲೆ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.
ಕಲಬುರಗಿ ಮಹಾನಗರ ಪಾಲಿಕೆಯ ಪೌರಕಾರ್ಮಿಕರಿಗೆ ಇ.ಎಸ್.ಐ. ಮತ್ತು ಪಿ.ಎಫ್ ವೇತನ ಗುತ್ತಿಗೆದಾರ ಸರಿಯಾಗಿ ಪಾವತಿ ಮಾಡದಿರುವ ಸಂಬAಧ ಕಾರ್ಮಿಕ ಉಪ ಆಯುಕ್ತರ ಬಳಿ ಪ್ರಕರಣ ಬಾಕಿಯಿದ್ದು, ಕೂಡಲೆ ಇತ್ಯರ್ಥಪಡಿಸಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಹರಿ ದೇಶಪಾಂಡೆ ಅವರಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಪೌರಕಾರ್ಮಿಕರಿಗೆ ಆಗಾಗ ಆರೋಗ್ಯ ತಪಾಸಣೆ ನಡೆಸಬೇಕು ಮತ್ತು ಅವರ ಸ್ವಚ್ಛತಾ ಕಾರ್ಯಕ್ಕೆ ಅಗತ್ಯ ಪರಿಕರಗಳನ್ನು ಪೌರ ಸಂಸ್ಥೆಗಳು ಪೂರೈಸಬೇಕು. ಗೃಹಭಾಗ್ಯ ಯೋಜನೆಯಡಿ ಪೌರ ಕಾರ್ಮಿಕರಿಗೆ ನಿವೇಶನ ನೀಡುವ ಸಂಬAಧ ಬೇಕಾಗುವ ನಿವೇಶನ ಮತ್ತು ಜಮೀನು ಕುರಿತು ಮಾಹಿತಿ ನೀಡುವಂತೆ ಡಿ.ಯು.ಡಿ.ಸಿ. ಯೋಜನಾ ನಿರ್ದೇಶಕ ಶಿವಶರಣಪ್ಪ ನಂದಗಿರಿ ಅವರಿಗೆ ಸೂಚಿಸಿದರು.
ಮಹಾನಗರ ಪಾಲಿಕೆಯ ಆಯುಕ್ತ ಸ್ನೇಹಲ ಸುಧಾಕರ ಲೋಖಂಡೆ ಮಾತನಾಡಿ ಗೃಹಭಾಗ್ಯ ಯೋಜನೆಯಡಿ ನಗರದ 122 ಪೌರಕಾರ್ಮಿಕರಿಗೆ ಮನೆ ನಿರ್ಮಣ ಕಾರ್ಯಕ್ಕೆ ಈಗಾಗಲೆ ಟೆಂಡರ್ ಕರೆಯಲಾಗಿದೆ ಎಂದು ಸಭೆಗೆ ತಿಳಿಸಿದರು.
ಡಿ.ಯು.ಡಿ.ಸಿ. ಯೋಜನಾ ನಿರ್ದೇಶಕ ಶಿವಶರಣಪ್ಪ ನಂದಗಿರಿ ಮಾತನಾಡಿ ಕಲಬುರಗಿ ಪಾಲಿಕೆಯ 160 ಸೇರಿದಂತೆ ಜಿಲ್ಲೆಯಾದ್ಯಂತ 196 ಮ್ಯಾನ್ಯುವಲ್ ಸ್ಕಾö್ಯವೆಂರ‍್ಸ್ಗಳೆAದು ಗುರುತಿಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಜಿಲ್ಲೆಯಾದ್ಯಂತ 9 ಸಕ್ಕಿಂಗ್ ಮತ್ತು 4 ಜಟ್ಟಿಂಗ್ ಯಂತ್ರಗಳಿದ್ದು, ಎಲ್ಲಿಯೂ ಮ್ಯಾನ್ ಹೋಲ್ ಸ್ವಚ್ಚತೆಗೆ ಮಾನವರನ್ನು ಬಳಸುತ್ತಿಲ್ಲ. ಗ್ರಾಮೀಣ ಭಾಗದಲ್ಲಿಯೂ ಮ್ಯಾನ್ಯುವಲ್ ಸ್ಕಾö್ಯವೆಂರ‍್ಸ್ಗಳ ಸಮೀಕ್ಷೆ ಕೈಗೊಳ್ಳುವಂತೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದರು.

LEAVE A REPLY

Please enter your comment!
Please enter your name here