26ರಂದು ಸೇಡಂನಲ್ಲಿ 15 ಜನರಿಗೆ `ಅಮ್ಮ ಪ್ರಶಸ್ತಿ’ ಪ್ರದಾನ

0
742

ಕಲಬುರಗಿ, ನ. 12- ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ದಿಂದ ಕೊಡಮಾಡುವ ರಾಜ್ಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಯಾಗಿರುವ ಅಮ್ಮ ಪ್ರಶಸ್ತಿ’ಗೆ ಅಥಣಿಯ ಪ್ರಭು ಚೆನ್ನಬಸವಸ್ವಾಮೀಜಿ, ಕಾದಂಬ ರಿಕಾರಡಾ.ಭೈರಮಂಗಲ ರಾಮೇ ಗೌಡ,ಲೇಖಕಿ ಕಾವ್ಯಶ್ರೀ ಮಹಾ ಗಾಂವಕರ್, ಡಾ.ಆನಂದ ಋಗ್ವೇ ದಿ, ಸುನೀತಾ ಕುಶಾಲ ನಗರ, ಭಾರತಿ ಬಿ ವಿ, ಡಾ.ಅಶೋಕ ನರೋಡೆ, ಚೇತನ್ ಸೋಮೇಶ್ವರ, ಲಕ್ಷಿö್ಮಶಂಕರ ಜೋಶಿ, ಡಾ.ಕೆ.ಆರ್. ಸಂಧ್ಯಾರೆಡ್ಡಿ, ಡಾ.ಶ್ರುತಿ ಬಿ ಆರ್, ನಂದಿನಿ ಹೆದ್ದುರ್ಗ, ಶ್ರೀದೇವಿ ಕೆರೆಮನೆ, ನಿರ್ಮಲಾ ಶೆಟ್ಟರ್ ಹಾಗೂ ಸಹದೇವ ಯರಗೊಪ್ಪ ಅವರ ಕೃತಿಗಳು ಆಯ್ಕೆಯಾ ಗಿವೆ ಎಂದು ಅಮ್ಮ ಪ್ರಶಸ್ತಿ ಸಂ ಚಾಲಕಿ ರತ್ನ ಕಲಾ ಮಹಿಪಾಲ ರೆಡ್ಡಿ ಮುನ್ನೂರ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಾದಂಬರಿ : ಮಾಯಾಕಿನ್ನರಿ (ಡಾ.ಭೈರ ಮಂ ಗಲ ರಾಮೇಗೌಡ)- ಒಳ್ಕಲ್ಲ ಒಡ ಲು(ಕಾವ್ಯಶ್ರೀ ಮಹಾಗಾಂವಕರ್), ಕಥೆ : ಕರಕೀಯ ಕುಡಿ(ಡಾ. ಆನಂದ ಋಗ್ವೇದಿ)-ಇಂಜಿಲಗೆರೆ ಪೋಸ್ಟ್ (ಸುನೀತಾ ಕುಶಾಲ ನಗರ), ಪ್ರವಾಸ : ನಕ್ಷತ್ರಗಳ ಸುಟ್ಟ ನಾಡಿನಲ್ಲಿ (ಭಾರತಿ ಬಿ ವಿ)-ಕೋಟಿ(ಡಾ.ಅಶೋಕ ನರೋಡೆ), ಸಂಕೀರ್ಣ: ಮಹಾತ್ಮರ ಚರಿತಾ ಮೃತ (ಪ್ರಭು ಚೆನ್ನಬಸವ ಸ್ವಾಮೀ ಜಿ ಅಥಣಿ - ಕರೋನಾ ಮುಕ್ತೆಯ ಕಥನ ( ಡಾ.ಕೆ.ಆರ್. ಸಂಧ್ಯಾರೆಡ್ಡಿ), ಸಂಶೋಧನೆ: ಲೋಕರೂಢಿಯ ಮೀರಿ (ಚೇತನ್ ಸೋಮೇಶ್ವರ), ಹಿಂದೂಸ್ತಾನಿ ಸಂಗೀತ ವಾಹಿನಿ (ಲಕ್ಷಿö್ಮಶಂಕರ ಜೋಶಿ), ಕಾವ್ಯ : ಜೀರೋ ಬ್ಯಾಲೆನ್ಸ್ (ಡಾ.ಶ್ರುತಿ ಬಿ ಆರ್), ರತಿಯ ಕಂಬನಿ(ನAದಿನಿ ಹೆದ್ದುರ್ಗ), ಮೈ ಮುಚ್ಚಲೊಂದು ತುಂಡುಬಟ್ಟೆ (ಶ್ರೀದೇವಿ ಕೆರೆಮನೆ), ಸರಹದ್ದುಗಳಿಲ್ಲದ ಭೂಮಿಯ ಕನಸು ( ನಿರ್ಮಲಾ ಶೆಟ್ಟರ್), ಬಿರಿದ ನೆಲದ ಧ್ಯಾನ (ಸಹದೇವ ಯರಗೊಪ್ಪ) ಕೃತಿಗಳನ್ನು 21 ನೇ ವರ್ಷದಅಮ್ಮ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ.
ಪ್ರತಿ ವಿಭಾಗದಲ್ಲಿ ತಲಾ 5000 ರೂ.ರಂತೆ ನಗದು ಪುರ ಸ್ಕಾರ ನೀಡಲಾಗುತ್ತಿತ್ತು. ಈ ಬಾರಿ ಕಾದಂಬರಿ, ಕಥೆ, ಪ್ರವಾಸ, ಸಂಕೀ ರ್ಣ ಮತ್ತು ಸಂಶೋಧನೆ ವಿಭಾ ಗದಲ್ಲಿ ಪ್ರಶಸ್ತಿ ಮೊತ್ತವನ್ನು ಇಬ್ಬಿಬ ್ಬರಿಗೆ ಹಂಚಿಕೆ ಮಾಡಲಾ ಗುತ್ತಿದೆ. ಜೊತೆಗೆ, ಕಾವ್ಯ ವಿಭಾಗ ದಲ್ಲಿ ಐವರು ಪ್ರಶಸ್ತಿಗೆ ಭಾಜನ ರಾಗಿದ್ದು, ಅದರಲ್ಲೂ ಐವರಿಗೆ ಹಂಚಿಕೆ ಮಾಡಲಾಗುವುದು. ಪ್ರತಿ ವರ್ಷ 25 ಸಾವಿರ ರು.ನಗದು ಪುರಸ್ಕಾರ ನೀಡುವುದನ್ನು ಈ ಬಾರಿ 30 ಸಾವಿರಕ್ಕೆ ಏರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನವೆಂಬರ್ 26 ರಂದು ಸಂಜೆ 5.30ಕ್ಕೆ ಸೇಡಂ ಪಟ್ಟಣದ ಶ್ರೀ ಪಂಚಲಿAಗೇಶ್ವರ ದೇವಾಲ ಯದ ಶಾಂಭವಿ ರಂಗಮAಟಪ ದಲ್ಲಿ ಜರುಗುವ ಸಮಾರಂಭದಲ್ಲಿ ಅಮ್ಮ ಪ್ರಶಸ್ತಿ’ ಪ್ರದಾನ ಮಾಡ ಲಾಗುವುದು. ಅಮ್ಮ ಪ್ರಶಸ್ತಿಗೆ 21ನೇ ವರ್ಷದ ಸಂಭ್ರಮ : ಪತ್ರಕರ್ತ-ಲೇಖಕ ಮಹಿ ಪಾಲರೆಡ್ಡಿ ಮುನ್ನೂರ್ ಅವರು ತಮ್ಮ ಅಮ್ಮನ ನೆನಪಿನಲ್ಲಿ ಸ್ಥಾಪಿ ಸಿದಅಮ್ಮ ಪ್ರಶಸ್ತಿ’ಗೆ ಈಗ 21 ನೇ ವರ್ಷದ ಸಂಭ್ರಮ. ಕನ್ನಡದ ಪ್ರತಿಭಾವಂತ ಬರಹಗಾರರು ಅಮ್ಮ ಪ್ರಶಸ್ತಿ’ಗಾಗಿ ತಮ್ಮ ಕೃತಿಗ ಳನ್ನು ಕಳುಹಿಸುವ ಮೂಲಕ ಪ್ರ± Àಸ್ತಿಯನ್ನು ಗುರುತಿಸಿದ್ದಾರೆ ಹಾಗೂ ಗೌರವಿಸಿದ್ದಾರೆ. ಈ ಬಾರಿ 524 ಕೃತಿಗಳು ಬಂದಿದ್ದವು. ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಅಮ್ಮ ಪ್ರಶಸ್ತಿ’ ರಾಜ್ಯದ ಗಣನೀ ಯ ಪ್ರಶಸ್ತಿಗಳಲ್ಲಿ ಒಂದಾಗಬೇಕು ಎಂಬ ಪ್ರತಿಷ್ಠಾನದ ಆಶಯಕ್ಕೆ ಅನುಗುಣವಾಗಿ ನಾಡಿನ ಖ್ಯಾತ ಲೇಖಕರು, ಕವಿಗಳು, ಪ್ರಕಾಶಕರು ಮತ್ತು ಲೇಖಕರ ಅಭಿಮಾನಿ ಓದುಗರು ಸ್ಪಂದಿಸಿದ್ದೇ ಇದೊಂದು ಗೌರವಾನ್ವಿತ ಪ್ರಶಸ್ತಿಯಾಗಿ ರೂ ಪುಗೊಂಡಿದೆ ಎಂಬುದಕ್ಕೆ ಸಾಕ್ಷಿ ಎಂದು ಅಮ್ಮ ಪ್ರಶಸ್ತಿ ಸಂಚಾ ಲಕಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here