ಅಫಜಲಪುರ, ಮಾ. 11: ತಾಲೂಕಿನ ಸುಪ್ರಸಿದ್ಧ ದೇವಲ ಗಾಣಗಾಪುರದ ದತ್ತಾತ್ರೇಯ ಮಹಾರಾಜರ ದರ್ಶನಕ್ಕೆ ಆಗಮಿಸಿದ ಮಹಾರಾಷ್ಟ್ರ ರಾಜ್ಯದ ಅಹ್ಮದ್ ನಗರದ ನಿವಾಸಿಗಳು ಎಂದು ಹೇಳಲಾಗುತ್ತಿರುವ 5 ಜನರು ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಈ ದುರ್ಘಟನೆ ಶುಕ್ರವಾರ ಮದ್ಯಾಹ್ನ ಮೂರು ಗಂಟೆ ಸುಮಾರಿಗೆ ಈ ಘಟನೆ ತಾಲೂಕಿನ ಬಳೂರ್ಗಿ ಗ್ರಾಮದ ಸಮೀಪ ನಡೆದಿದೆ.
ದತ್ತನ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದು ಮರಳಿ ಮಹಾರಾಷ್ಟ್ರ ಕಡೆ ಹೊರಟಿದ್ದ ಕಾರು ಏಕಾಏಕಿ ನಿದ್ರೆ ಮಂಪರಿನಲ್ಲಿದ್ದ ಚಾಲಕ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು 4 ಜನ ಹೆಣ್ಣು ಮಕ್ಕಳು ಹಾಗೂ ಓರ್ವ ಚಾಲಕ ಸೇರಿ 5 ಜನ ಮೃತಪಟ್ಟಿದ್ದು ಘಟನೆಯಲ್ಲಿ ಮಕ್ಕಳು ಸೇರಿ ಮೂರು ಜನರಿಗೆ ಗಂಭೀರ ಗಾಯವಾಗಿವೆ.
![](https://manishpatrike.com/wp-content/uploads/2022/03/IMG-20220311-WA0176.jpg)
![](https://manishpatrike.com/wp-content/uploads/2022/03/IMG-20220311-WA0176.jpg)
ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಇಬ್ಬರ ಸ್ಥಿತಿ ಚಿಂತಾಜ ನಕವಾಗಿದೆ.
ಆದರೆ ಸದ್ಯ ಮೃತರ ಗುರುತು ಪತ್ತೆಯಾಗಿಲ್ಲ ಸ್ಥಳಕ್ಕೆ ಅಫಜಲಪುರ ಸಿಪಿಐ ಜಗದೇವಪ್ಪ ಪಾಳಾ, ಪಿಎಸ್ಐ ವಿಶ್ವನಾಥ ಮುದರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.