ಪಾಳಾ ಗ್ರಾಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ “ಕಂದಾಯ ದಾಖಲೆ ಮನೆ ಬಾಗಿಲಿಗೆ” ಯೋಜನೆಗೆ ಚಾಲನೆ

0
584

ಕಲಬುರಗಿ,ಮಾ.12: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಕಂದಾಯ ಇಲಾಖೆಯ ಸೇವೆಗಳನ್ನು ಉಚಿತವಾಗಿ ಒದಗಿಸುವ “ಕಂದಾಯ ದಾಖಲೆ ಮನೆ ಬಾಗಿಲಿಗೆ” ಶನಿವಾರ ಕಲಬುರಗಿ ತಾಲೂಕಿನ ಪಾಳಾ ಗ್ರಾಮದಲ್ಲಿ ರೈತರ ಮನೆಗೆ ತೆರಳಿ ಪಹಣಿ, ಅಟ್ಲಾಸ್ ಪೋಡಿ, ಜಾತಿ-ಆದಾಯ ಸೇರಿದಂತೆ ಇತರೆ ಕಂದಾಯ ದಾಖಲೆಗಳನ್ನು ಪ್ಲಾಸ್ಟಿಕ್ ಸುರಕ್ಷೆಯೊಂದಿಗೆ ನೀಡುವ ಮೂಲಕ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಮುರುಗೇಶ ನಿರಾಣಿ ಅವರು ಚಾಲನೆ ನೀಡಿದರು.
“ಕಂದಾಯ ದಾಖಲೆ ಮನೆ ಬಾಗಿಲಿಗೆ” ಯೋಜನೆಗೆ ಶನಿವಾರ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ ಅವರು ಚಿಕ್ಕಬಳ್ಳಾಪೂರದಲ್ಲಿ ಚಾಲನೆ ನೀಡಿದರೆ, ಜಿಲ್ಲೆಯ ಕಲಬುರಗಿ ತಾಲೂಕಿನ ಪಾಳಾ ಗ್ರಾಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಅವರು ಸರ್ಕಾರದ ದೃಢ ಹೆಜ್ಜೆಯ ಈ ಯೋಜನೆಗೆ ಞಚಾಲನೆ ನೀಡಿದರು.
ಜಿಲ್ಲೆಯಲ್ಲಿ 5 ಲಕ್ಷ ಪಹಣಿ ಹಕ್ಕುಳವರಿದ್ದು, ಈ ಪೈಕಿ ಪಿ.ಎಂ-ಕಿಸಾನ್ ಯೋಜನೆಯಡಿ ನೊಂದಾಯಿಸಿದ 1.5 ಲಕ್ಷ ಕುಟುಂಬಗಳಿಗೆ 277867 ಪಹಣಿ, 104264 ಅಟ್ಲಾಸ್ ಮ್ಯಾಪ್, 432746 ಜಾತಿ-ಆದಾಯ ಪ್ರಮಾಣ ಪತ್ರಗಳನ್ನು ವಿಳಾಸ ಲೇಬಲ್ ಸಂಖ್ಯೆ ಜೊತೆಗೆ ಪ್ಲಾಸ್ಟಿಕ್ ಕವರ್ ರಕ್ಷೆಯೊಂದಿಗೆ ಕಂದಾಯ ಇಲಾಖೆಯ ಸಿಬ್ಬಂದಿಗಳು ಜಿಲ್ಲೆಯಾದ್ಯಂತ ಶನಿವಾರದಿಂದ ಮನೆ ಬಾಗಿಲಿಗೆ ಹೋಗಿ ಉಚಿತವಾಗಿ ವಿತರಿಸಲಿದ್ದಾರೆ.
ಈ ಸಂದರ್ಭದಲ್ಲಿ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ, ವಿಧಾನ ಪರಿಷತ್ತಿನ ಮಾಜಿ ಶಾಸಕ ಅಮರನಾಥ ಪಾಟೀಲ ಸೇರಿದಂತೆ ಸ್ಥಳೀಯ ಮುಖಂಡರು ಮತ್ತು ಕಂದಾಯ ಇಲಾಖೆಯ ಅಧಿಕಾರಿ-ಸಿಬ್ಬಂದಿಗಳು ಇದ್ದರು.

LEAVE A REPLY

Please enter your comment!
Please enter your name here