ಹೆಡ್ಗೆವಾರ್ ಕುರಿತು ಪಠ್ಯದಲ್ಲಿ ಸೇರ್ಪಡೆಗೆ ರಾಜ್ಯಸಭೆ ವಿಪಕ್ಷ ನಾಯಕ ಖರ್ಗೆ ಕಡು ವಿರೋಧ

0
703

ಕಲಬುರ್ಗಿ, ಮೇ.17- ರಾಷ್ಟಿçÃಯ ಸ್ವಯಂ ಸೇವಕ ಸಂಘದ ಸಂಸ್ಥಾಪಕ ಹೆಡ್ಗೆವಾರ್ ಅವರ ಕುರಿತು ಪಠ್ಯದಲ್ಲಿ ಸೇರ್ಪಡೆ ಮಾಡುವುದು ಸರಿಯಲ್ಲ ಎಂದು ರಾಜ್ಯಸಭೆಯಲ್ಲಿನ ವಿರೋಧ ಪಕ್ಷದ ಮುಖಂಡ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಡಾ. ಮಲ್ಲಿಕಾರ್ಜುನ್ ಖರ್ಗೆಯವರು ಇಲ್ಲಿ ವಿರೋಧಿಸಿದರು.
ಮಂಗಳವಾರ ತಮ್ಮ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರö್ಯ ಹೋರಾಟದಲ್ಲಿ ರಾಷ್ಟಿçÃಯ ಸ್ವಯಂ ಸೇವಕ ಸಂಘದ ಯಾವುದೇ ಪಾತ್ರವಿಲ್ಲ. ಅಂತಹ ಸಂಘದ ಸಂಸ್ಥಾಪಕರ ಕುರಿತು ಪಠ್ಯದಲ್ಲಿ ಸೇರಿಸುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
1930ರಲ್ಲಿ ರಾಷ್ಟಿçÃಯ ಸ್ವಯಂ ಸೇವಕ ಸಂಘವು ಹುಟ್ಟಿಕೊಂಡಿದೆ. ಆದಾಗ್ಯೂ, ಸ್ವಾತಂತ್ರö್ಯ ಹೋರಾಟದಲ್ಲಿ ಆ ಸಂಘದ ಕೊಡುಗೆ ಏನೂ ಇಲ್ಲ. ಅಲ್ಲದೇ ಅದರ ಸಂಸ್ಥಾಪಕ ಹೆಡ್ಗೇವಾರ್ ಅವರು ಮೂಲತ: ಕಾಂಗ್ರೆಸ್ಸಿಗರು ಎಂಬುದನ್ನು ಬಿಜೆಪಿಯವರು ಮರೆಯಬಾರದು. ಹೆಡ್ಗೆವಾರ್ ಅವರು ದೊಡ್ಡ ವ್ಯಕ್ತಿಯೂ ಅಲ್ಲ. ಅವರಿಂದ ದೇಶಕ್ಕೆ ಯಾವುದೇ ರೀತಿಯ ಕೊಡುಗೆಯೂ ಇಲ್ಲ. ಹಾಗಾಗಿ ಪಠ್ಯದಲ್ಲಿ ಸೇರಿಸಬಾರದು ಎಂದು ಅವರು ಒತ್ತಾಯಿಸಿದರು.
ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಮೇಲೆ ದ್ವೇಷ ರಾಜಕಾರಣ ಹಾಗೂ ಪಕ್ಷಪಾತಿ ರಾಜಕೀಯವನ್ನು ಮಾಡುತ್ತಿದೆ. ರಾಷ್ಟಿçÃಯ ಸ್ವಯಂ ಸೇವಕ ಸಂಘದ ಅಣತಿಯಂತೆ ಕಾರ್ಯನಿರ್ವಹಿಸುತ್ತಿದೆ ಎಂದು ದೂರಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ನಾನು ಲೋಕಸಭೆಯಲ್ಲಿದ್ದಾಗ ನನಗೆ ಮುಂದಿನ ಚುನಾವಣೆಯಲ್ಲಿ ನೀವು ಎಲ್ಲಿರುತ್ತೀರಿ? ಎಂದು ಪ್ರಶ್ನಿಸಿ ನನ್ನ ಸೋಲಿನ ಕುರಿತು ಸದನದಲ್ಲಿಯೇ ಸುಳಿವು ನೀಡಿದ್ದರು. ಅದೇ ರೀತಿ ನನಗೆ ಸೋಲಾಯಿತು. ಈಗ ನನ್ನ ಪುತ್ರ ಪ್ರಿಯಾಂಕ್ ಖರ್ಗೆ ಅವರ ಸೋಲಿಗೆ ಬಿಜೆಪಿ ಮುಂದಿದೆ. ಅದರ ಹಿಂದೆ ಸಂಘ ಪರಿವಾರದ ಹುನ್ನಾರವಿದೆ ಎಂದು ದೂರಿದರು.
ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಕುರಿತು ಪ್ರಸ್ತಾಪಿಸಿದ ಅವರು, ವಿವಾದವು ಈಗ ನ್ಯಾಯಾಲಯದಲ್ಲಿದೆ. ಆ ಕುರಿತು ಪ್ರತಿಕ್ರಿಯೆ ನೀಡುವುದಿಲ್ಲ. ಮನೆಯಲ್ಲಿಯೇ ಶಿವಲಿಂಗಕ್ಕೆ ಪೂಜೆ ಮಾಡಿದರೆ ಸಾಕು. ಮಸೀದಿಯಲ್ಲಿಯೇ ಹೋಗಿ ಪೂಜೆ ಮಾಡಬೇಕು ಎಂಬುದು ಸರಿಯಲ್ಲ ಎಂದರು.
ಇನ್ನು ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಮ್ ಅವರ ಮನೆಯ ಮೇಲೆ ಸಿಬಿಐ ದಾಳಿ ಮಾಡಿದ್ದನ್ನು ಟೀಕಿಸಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿರಿಸಿಕೊಂಡು ದಾಳಿಗಳು ನಡೆಯುತ್ತಿವೆ. ಈಗ ಅದು ಮುಂದುವರೆದಿದೆ ಎಂದು ಆಕ್ರೋಶ ಹೊರಹಾಕಿದರು.

LEAVE A REPLY

Please enter your comment!
Please enter your name here