ಸಿದ್ಧರಾಮಯ್ಯರ ಮುಂದೆ ಅನುಚಿತ ವರ್ತನೆ ವಿಷಾಧ ವ್ಯಕ್ತಪಡಿಸಿದ ರಾಜಮಾ ಕಲಾದಗಿ

0
462

ಬಾಗಲಕೋಟ, ಜುಲೈ. 16: ಕೆಲವರು ಸೃಷ್ಟಿ ಮಾಡಿದ ಅಶಾಂತಿಯ ವಾತಾವರಣದಿಂದ ಕೆರೂರಿನಲ್ಲಿ ಉದ್ರಿಕ್ರ ವಾತಾವರಣ ನಿರ್ಮಾಣವಾಗಿದೆ. ಯಾವುದೇ ತಪ್ಪು ಮಾಡದಿದ್ದರೂ ಅಮಾಯಕರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಹೀಗಾಗಿ ನಮ್ಮ ಮನಸ್ಸಿಗೆ ಭಾರಿ ನೋವಾಗಿತ್ತು ಎಂದು ಶ್ರೀಮತಿ ರಾಜಮಾ ರೆಹಮಾನಸಾಬ ಕಲಾದಗಿ ಅವರು ಖೇದ ವ್ಯಕ್ತಪಡಿಸಿದ್ದಾರೆ
ಅವರು ಈ ಕುರಿತು ಹೇಳಿಕೆಯೊಂದನ್ನು ನೀಟಿ ಈ ನೋವಿನಲ್ಲಿ ಸಿದ್ದರಾಮಯ್ಯ ಅವರ ಮಂದೆ ಅನುಚಿತವಾಗಿ ನಡೆದುಕೊಳ್ಳಬೇಕಾಯಿತು. ಇದಕ್ಕಾಗಿ ನಾವು ತೀವ್ರ ವಿಷಾದ ವ್ಯಕ್ತಪಡಿಸುತ್ತೇವೆ. ಸಿದ್ದರಾಮಯ್ಯ ಅವರ ಮನಸ್ಸಿಗೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇವೆ ಎಂದು ಗಾಯಾಳುಗಳು ಸಂಬAಧಿಕರು ಹೇಳಿದ್ದಾರೆ.
ಸಿದ್ದರಾಮಯ್ಯ ಅವರಿಗೆ ಅಗೌರವ ತೋರಿಸುವ ಯಾವುದೇ ಉದ್ದೇಶ ನಮ್ಮದಾಗಿರಲಿಲ್ಲ. ಅವರಿಗೆ ಅವಮಾನ ಮಾಡುವ ಉದ್ದೇಶವೂ ಎಳ್ಳಷ್ಟು ನಮ್ಮಲ್ಲಿ ಇರಲಿಲ್ಲ.
ನಡೆದಿರುವ ಘಟನೆಗಳ ಹಿನ್ನೆಲೆಯಲ್ಲಿ ನಮ್ಮ ಮನಸ್ಸಿಗೆ ತೀವ್ರ ಘಾಸಿಯಗಿದೆ. ಸಿದ್ದರಾಮಯ್ಯ ಅವರು ಹಣ ನೀಡುವುದಕ್ಕಿಂತ ಅವರು ನಮಗೆ ನ್ಯಾಯ ಒದಗಿಸಿಕೊಡಬೇಕು ಎಂಬುದೇ ನಮ್ಮ ಕಳಕಳಿಯ ಮನವಿಯಾಗಿದೆ. ಸಿದ್ದರಾಮಯ್ಯ ಅವರು ನಮ್ಮ ಸಮುದಾಯದ ನಾಯಕರು. ಸದಾ ನಮ್ಮ ಸಮುದಾಯದ ಪರ ನಿಲ್ಲುವ ರಾಜಕಾರಣಿ ಅವರು. ಈ ರೀತಿ ಇರುವಾಗ ಅವರಿಗೆ ಅವಮಾನ ಮಾಡುವ ಮಟ್ಟಕ್ಕೆ ನಾವು ಹೋಗುವುದಿಲ್ಲ.
ಆಕಸ್ಮಿಕವಾಗಿ ನಡೆದಿರುವ ಘಟನೆ ಇದಾಗಿಯೇ ಹೊರತು ಸಿದ್ದರಾಮಯ್ಯ ಅವರಿಗೆ ಅಗೌರವ ತೋರಿಸುವ ಉದ್ದೇಶ ನಮ್ಮದಾಗಿರಲಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇವೆ ಗಲಭೆಯಲ್ಲಿ ಗಾಯಗೊಂಡ ಸಂಬAಧಕರಾದ ಶ್ರೀಮತಿ ಬಿಸ್ಮಿಲ್ಲಾ ಹನೀಫಸಾಬ ಚಿಕ್ಕೂರ, ರಾಜೇಸಾಬ ಜಾಫರಸಾಬ ಮಳಗಲಿ, ದಾವಲಮಲ್ಲಿಕ್ ಮೆಹಬೂಬಸಾಬ ಮಳಗಲಿ, ರಫೀಕ ಕರೀಮಸಾಬ ಮಳಗಲಿ, ಹನೀಫ ಚಾಂದಸಾಬ ಚಿಕ್ಕೂರ ಮತ್ತು ಶ್ರೀಮತಿ ಯಾಸ್ಮೀನ ರಾಜೇಸಾಬ ಮಳಗಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here