ವಿನಾಕಾರಣ ರೌಡಿಗಳನ್ನು ರೌಡಿ ಪಟ್ಟಿಯಿಂದ ಕೈಬಿಟ್ಟರೆ ಪೋಲಿಸ್ ಅಧಿಕಾರಿಗಳ ವಿರುದ್ಧ ಕ್ರಮ:ಅಲೋಕಕುಮಾರ

0
746

ಕಲಬುರಗಿ ಜುಲೈ 19:ಯಾವುದೇ, ರೌಡಿಗಳನ್ನ ರೌಡಿ ಪಟ್ಟಿಯಿಂದ ಕೈಬಿಡಲಾಗಿಲ್ಲ. ವಿನಾಕಾರಣ ರೌಡಿಗಳನ್ನ ರೌಡಿ ಪಟ್ಟಿಯಿಂದ ಕೈಬಿಟ್ಟರೆ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ, ಮರಳುಗಾರಿಕೆ ತಡೆಗಟ್ಟಲು ಕೇವಲ ಪೊಲೀಸರಿಂದ ಸಾಧ್ಯವಿಲ್ಲ. ಅದಕ್ಕೆ ಗಣಿಗಾರಿಕೆ, ಕಂದಾಯ, ಆರ್‌ಟಿಓ ಇಲಾಖೆಗಳ ಸಹಕಾರ ಅಗತ್ಯವಾಗಿದೆ ಎಂದು ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ ವಿಭಾಗ) ಅಲೋಕಕುಮಾರ ಅವರು ಹೇಳಿದರು.
ನಗರದ ಡಿಎಆರ್ ಪರೇಡ್ ಮೈದಾನದ ಸನ್ಮತಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ರೌಡಿ ಪಡೆ ನಿಗ್ರಹಕ್ಕೂ ಸೂಚನೆ ನೀಡಲಾಗಿದ್ದು, ಗೂಂಡಾ ಕಾಯ್ದೆ ಅಥವಾ ಸಾಧ್ಯವಾದರೆ ಕೋಕಾ ಕಾಯ್ದೆ ಜಾರಿ ತರುವಂತೆ ನಿರ್ದೇಶನ ನೀಡಲಾಗಿದೆ. ಇದಲ್ಲದೇ, ಕಲಬುರಗಿ, ವಿಜಯಪುರ ಭಾಗಗಳಲ್ಲಿ ಅಕ್ರಮ ವೆಪನ್‌ಗಳ ಹಾವಳಿ ಇನ್ನೂ ಇದೆ. ಅಕ್ರಮ ವೆಪನ್‌ಗಳ ಮಟ್ಟಕ್ಕೆ ಎಲ್ಲಾ ರೀತಿಯ ಕ್ರಮಗಳನ್ನ ಕೈಗೊಳ್ಳಲಾಗಿದೆ. ಅಫಜಲಪುರ ಮತ್ತು ಚಡಚಣ ಭಾಗದಲ್ಲಿ ಅಕ್ರಮ ವೆಪನ್ ಹಾವಳಿ ಜಾಸ್ತಿ ಇದೆ. ಅಕ್ರಮ ವೆಪನ್‌ಗಳಿಂದ ಸಾಕಷ್ಟು ಅಪರಾಧ ಚಟುವಟಿಕೆಗಳು ನಡೆಯುತ್ತಿವೆ.
ಜನಸ್ನೇಹಿ ಕಾರ್ಯನಿರ್ವಹಣೆ ಗಾಗಿಯೇ ಸರಕಾರ ಮತ್ತು ಪೊಲೀಸ್ ಇಲಾಖೆ ಇರೋದು. ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸದಾ ಶ್ರಮಿಸುತ್ತದೆ
ಜನರ ಹಾಗೂ ಪೊಲೀಸರ ನಡುವೆ ಸಂಪರ್ಕ ಸಾಧಿಸುವ ನಿಟ್ಟಿನಲ್ಲಿ ನಿಗದಿತವಾಗಿ ಠಾಣೆಗಳಲ್ಲಿ ಜನ ಸಂಪರ್ಕ ಸಭೆ ಏರ್ಪಡಿಸಬೇಕು. ಪ್ರತಿದಿನ ಸಂಜೆ 5 ರಿಂದ 6 ಗಂಟೆವರೆಗೆ ಸಾರ್ವಜನಿಕರನ್ನು ಅಧಿಕಾರಿಗಳು ಕಡ್ಡಾಯವಾಗಿ ಭೇಟಿಯಾಗಿ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜನ ಸಂಪರ್ಕ ನಡೆಸಿದರೆ ಸ್ಥಳದಲ್ಲೇ ಹಲವಾರು ಸಮಸ್ಯೆ ಗಳನ್ನು ಬಗೆಹರೆಯುತ್ತವೆ. ಜನಸ್ನೇಹಿ ವಾತಾವರಣ ನಿರ್ಮಾಣ ವಾಗುತ್ತದೆ. ಅದಲ್ಲದೇ, ಭೇಟಿ ನೀಡಲು ಸಾರ್ವಜನಿಕರಿಗೆ ಸಮಯ ನಿಗದಿಪಡಿಸಿಕೊಂಡರೆ ಸಣ್ಣಪುಟ್ಟ ಸಮಸ್ಯೆಗಳನ್ನು ಬಗೆಹರಿಸಿ ಕೊಳ್ಳಬಹುದು. ಈ ಕುರಿತು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಬAದೂಕನ್ನ ಪರವಾನಿಗೆ ಪಡೆದವರು ಒಬ್ರು, ಬಳಸುತ್ತಿ ರುವರು ಇನ್ನೊಬ್ಬರು ಆಗಿದ್ದಾರೆ. ಇಂತಹ ಚಟುವಟಿಕೆಗಳನ್ನ ಗಂಭೀರವಾಗಿ ಪರಿಗಣಿಸಲಾಗುವುದು ಎಂದರು. ಈ ಹಿಂದೆ ಪಡೆದ ಗನ್ ಲೈಸನ್ಸ್ಗಳ ಮರುಪರಿಶೀಲನೆ ನಡೆಸಲು ಅಧಿಕಾರಿ ಗಳಿಗೆ ಅಲೋಕ ಕುಮಾರ ಅವರು ಹೇಳಿದರು.
ನಗರದಲ್ಲಿ ಅತಿ ಹೆಚ್ಚು ಜನರು ಓಡಾಡುವ ಪ್ರದೇಶಗಳಾದ ಸೂಪರ್ ಮಾರ್ಕೆಟ್, ಕೇಂದ್ರ ಬಸ್ ನಿಲ್ದಾಣ, ತಿಮ್ಮಾಪುರ ವೃತ್ತ, ಹುಮನಾಬಾದ ರಿಂಗ್ ರಸ್ತೆ, ಆಳಂದ ಚೆಕ್ ಪೋಸ್ಟ್ ಸೇರಿದಂತೆ ವಿವಿಧಡೆ ಪೊಲೀಸ್ ಅಧಿಕಾರಿಗಳನ್ನು ಗಸ್ತು ಹೊಡೆ ಯಲು ಸೂಚಿಸಲಾಗಿದೆ. ಈ ಮೂಲಕ ಟ್ರಾಫಿಕ್ ಜಾಮ್ ನಿಯಂತ್ರಣ ಬಗ್ಗೆ ಕ್ರಮ ಕೈಗೊಳ್ಳಲಾಗುವುದು.
ಈಶಾನ್ಯ ವಲಯ ಐಜಿಪಿ ಮನೀಷ ಖರ್ಬಿಕರ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ವೈ.ಎಸ್. ರವಿಕುಮಾರ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಇಶಾ ಪಂತ, ಬೀದರ್ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕಿಶೋರ ಬಾಬು, ಯಾದಗಿರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವೇದಮೂರ್ತಿ, ಡಿಸಿಪಿ ಅಡ್ಡೂರು ಶ್ರೀನಿವಾಸ ಸೇರಿದಂತೆ ಮುಂತಾದವರಿದ್ದರು.

Total Page Visits: 928 - Today Page Visits: 1

LEAVE A REPLY

Please enter your comment!
Please enter your name here