ಬಸವ ಜಯಂತಿ ಆಚರಣೆ: ಜಿಲ್ಲೆಯಾದ್ಯಂತಮದ್ಯ ಮಾರಾಟ ನಿಷೇಧಿಸಿ ಡಿ.ಸಿ. ಆದೇಶ

0
96

ಕಲಬುರಗಿ.ಏ.೨೯:ಇದೇ ಏಪ್ರಿಲ್ ೩೦ ರಂದು ಬಸವ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಇದೇ ಏಪ್ರಿಲ್ ೩೦ರ ಬೆಳಗಿನ ೬ ಗಂಟೆಯಿಂದ ಮೇ ೧ರ ಬೆಳಗಿನ ೬ ಗಂಟೆಯವರೆಗೆ ಎಲ್ಲಾ ತರಹದ ಮದ್ಯ ಮಾರಾಟ, ಸಾಗಾಟ ಹಾಗೂ ಮದ್ಯಪಾನವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ ಬಿ. ಫೌಜಿಯಾ ತರನ್ನುಮ್ ಅವರು ಆದೇಶ ಹೊರಡಿಸಿದ್ದಾರೆ.
ಕಲಬುರಗಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಎಲ್ಲಾ ತರಹದ ಮದ್ಯಪಾನ, ಸರಾಯಿ, ಶೆಂಧಿ, ಸ್ವದೇಶಿ ಹಾಗೂ ವಿದೇಶಿ ಮದ್ಯಪಾನ ಮತ್ತು ಮಾದಕ ವಸ್ತುಗಳ ಮಾರಾಟ, ಸಾಗಾಟ ಹಾಗೂ ಮದ್ಯಮಾನವನ್ನು ನಿಷೇಧಿಸಿ, ಅಂಗಡಿಗಳನ್ನು ಮುಚ್ಚುವಂತೆ ಅವರು ಆದೇಶ ಹೊರಡಿಸಿದ್ದಾರೆ.
ಈ ಸಂರ‍್ಭದಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ರ‍್ನಾಟಕ ಅಬಕಾರಿ ಕಾಯ್ದೆ ೧೯೬೫ರ ಕಲಂ ೨೧ರ ಅನ್ವಯ ಈ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here